GKKannadaSpardha Times

ಕನ್ನಡದ ಪ್ರಸಿದ್ಧ ಗಾದೆಗಳ ಸಂಗ್ರಹ

Share With Friends

👉 ವೇದ ಸುಳ್ಳಾದರೂ ಗಾದೆ ಸುಳ್ಳಾಗಲ್ಲ
👉 ಹಿತ್ತಲ ಗಿಡ ಮದ್ದಲ್ಲ.
👉 ಮಾಡಿದ್ದುಣ್ಣೋ ಮಹರಾಯ.
👉 ಕೈ ಕೆಸರಾದರೆ ಬಾಯಿ ಮೊಸರು.
👉 ಹಾಸಿಗೆ ಇದ್ದಷ್ತು ಕಾಲು ಚಾಚು.
👉 ಅ0ಗೈ ಹುಣ್ಣಿಗೆ ಕನ್ನಡಿ ಬೇಕೆ.
👉 ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಲ್ಲಿ ಮಣ ಹಾಕಿದರ0ತೆ.
👉 ಎತ್ತೆಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಳೆದರಂತೆ .
👉 ಮನೇಲಿ ಇಲಿ, ಬೀದೀಲಿ ಹುಲಿ.
👉 ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಮುಟ್ಟಿ ನೋದಿಕೊ0ಡನ0ತೆ.

👉 ಕಾರ್ಯಾವಾಸಿ ಕತ್ತೆಕಾಲು ಹಿಡಿ.
👉 ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು.
👉 ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು.
👉 ಕಪ್ಪೆನ ತಕ್ಕಡಿಲಿ ಹಾಕಿದ ಹಾಗೆ.
👉 ಅಡ್ಡಗೋಡೆಮೇಲೆ ದೀಪ ಇಟ್ಟ ಹಾಗೆ.
👉 ಅಕ್ಕಿ ಮೇಲೆ ಆಸೆ, ನೆಂಟರ ರ ಮೇಲೂ ಪ್ರೀತಿ.
👉 ಅಜ್ಜಿಗೆ ಅರಿವೆ ಚಿಂತೆ , ಮಗಳಿಗೆ ಗ0ಡನ ಚಿ0ತೆ.
👉 ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧರಾತ್ರೀಲಿ ಕೊಡೆ ಹಿಡಿದನ0ತೆ.
👉 ಅತ್ತೆಗೊಂದು ಕಾಲ ಸೊಸೆಗೊಂದು ಕಾಲ.
👉 ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದ ಹಾಗೆ.
👉 ಬೇಲೀನೆ ಎದ್ದು ಹೊಲ ಮೆಯ್ದಂತೆ .
👉 ಅಂಬಲಿ ಕುಡಿಯುವವನಿಗೆ ಮೀಸೆ ತಿಕ್ಕುವನೊಬ್ಬ.

👉 ಅಂತೂಇಂತು ಕುಂತಿ ಮಕ್ಕಳಿಗೆ ಇಂತೂ ರಾಜ್ಯವಿಲ್ಲ.
👉 ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ.
👉 ಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆ.
👉 ದೇವರು ವರ ಕೊಟ್ರು ಪೂಜಾರಿ ಕೊಡ.
👉 ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ.
👉 ಎತ್ತು ಏರಿಗೆಳೆಯಿತು, ಕೋಣ ನೀರಿಗೆಳೆಯಿತು.
👉 ಎತ್ತು ಈಯಿತು ಅಂದರೆ ಕೊಟ್ಟಿಗೆಗೆ ಕಟ್ಟು ಎಂದರಂತೆ .
👉 ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ.
👉 ಗುಬ್ಬಿ ಮೇಲೆ ಬ್ರಹ್ಮಾಸ್ತ್ರ.
👉 ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ ?

👉 ಗೆದ್ದೆತ್ತಿನ ಬಾಲ ಹಿಡಿದ ಹಾಗೆ.
👉 ಗಣೇಶನನ್ನು ಮಾಡಲು ಹೋಗಿ ಅವರಪ್ಪನನ್ನು ಮಾಡಿದನ0ತೆ.
👉 ಭಂಗಿ ದೇವರಿಗೆ ಹೆಂಡುಗುಡುಕ ಪೂಜಾರಿ.
👉 ಕಾಸಿಗೆ ತಕ್ಕ ಕಜ್ಜಾಯ.
👉 ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು.
👉 ಕೂಸು ಹುಟ್ಟುವ ಮುಂಚೆ ಕುಲಾವಿ.
👉 ಅವರು ಚಾಪೆ ಕೆಳಗೆ ತೂರಿದರೆ ನೀನು ರಂಗೋಲಿ ಕೆಳಗೆ ತೂರು.
👉 ಇಬ್ಬರ ಜಗಳ ಮೂರನೆಯವನಿಗೆ ಲಾಭ.
👉 ವೈದ್ಯರ ಹತ್ತಿರ ವಕೀಲರ ಹತ್ತಿರ ಸುಳ್ಳು ಹೇಳಬೇಡ.
👉 ತಾನು ಮಾಡುವುದು ಉತ್ತಮ, ಮಗ ಮಾಡುವುದು ಮಧ್ಯಮ, ಆಳು ಮಾಡುವುದು ಹಾಳು.

👉 ಉಚ್ಚೇಲಿ ಮೀನು ಹಿಡಿಯೋ ಜಾತಿ.
👉 ಹುಟ್ಟುತ್ತಾ ಹುಟ್ಟುತ್ತಾ ಅಣ್ಣ ತಮ್ಮಂದಿರು, ಬೆಳಿತಾ ಬೆಳಿತಾ ದಾಯಾದಿಗಳು.
👉 ಮಗೂನೂ ಚಿವುಟಿ ತೊಟ್ಟಿಲು ತೂಗಿದ ಹಾಗೆ.
👉 ನದೀನೆ ನೋಡದೆ ಇರುವನು ಸಮುದ್ರವರ್ಣನೆ ಮಾಡಿದ ಹಾಗೆ.
👉 ಅಂಗೈಯಲ್ಲಿ ಬೆಣ್ಣೆ ಇಟ್ಕೊಂಡು ಊರೆಲ್ಲಾ ತುಪ್ಪಕ್ಕೆ ಅಲೆದಾಡಿದರಂತೆ
👉 ಶುಭ ನುಡಿಯೋ ಸೋಮ ಅಂದರೆ ಗೂಬೆ ಕಾಣ್ತಿದ್ಯಲ್ಲೋ ಮಾಮ ಅಂದ ಹಾಗೆ.
👉 ನಮ್ಮ ದೇವರ ಸತ್ಯ ನಮಗೆ ಗೊತ್ತಿಲ್ಲವೇ ?
👉 ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ.
👉 ಕಜ್ಜಿ ಹೋದರೂ ಕಡಿತ ಹೋಗಲಿಲ್ಲ.
👉 ಮಾತು ಬೆಳ್ಳಿ, ಮೌನ ಬಂಗಾರ

👉 ಎಲ್ಲಾರ ಮನೆ ದೋಸೆನೂ ತೂತೆ.
👉 ಒಲ್ಲದ ಗಂಡನಿಗೆ ಮೊಸರಲ್ಲೂ ಕಲ್ಲು.
👉 ಅಡುಗೆ ಮಾಡಿದವಳಿಗಿಂತ ಬಡಿಸಿದವಲೇ ಮೇಲು.
👉 ತಾಯಿಯಂತೆ ಮಗಳು ನೂಲಿನಂತೆ ಸೀರೆ.
👉 . ಅನುಕೂಲ ಸಿಂಧು , ಅಭಾವ ವೈರಾಗ್ಯ.
👉 ಕೊಚ್ಚೆ ಮೇಲೆ ಕಲ್ಲು ಹಾಕಿದ ಹಾಗೆ.
👉 ತಮ್ಮ ಮನೇಲಿ ಹಗ್ಗಣ ಸತ್ತಿದ್ದರೂ ಬೇರೆ ಮನೆಯ ಸತ್ತ ನೊಣದ ಕಡೆ ಬೆಟ್ಟು ಮಾಡಿದ ಹಾಗೆ.
👉 ಹುಣಿಸೆ ಮುಪ್ಪಾದರೂ ಹುಳಿ ಮುಪ್ಪೇ ?
👉 ಮನೆಗೆ ಮಾರಿ, ಊರಿಗೆ ಉಪಕಾರಿ.
👉 ಉಗುರಿನಲ್ಲಿ ಹೋಗೋ ಚಿಗುರಿಗೆ ಕೋಡಾಲಿ ಏಕೆ ?

👉 ಅಲ್ಪರ ಸಂಗ ಅಭಿಮಾನ ಭಂಗ .
👉 ಸಗಣಿಯವನ ಸ್ನೇಹಕ್ಕಿಂತ ಗಂಧದವನ ಜೊತೆ ಗುದ್ದಾಟ ಮೇಲು.
👉 ಮಾಡಿದವರ ಪಾಪ ಆಡಿದವರ ಬಾಯಲ್ಲಿ.
👉 ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ಯೇ ?
👉 ಗೋರ್ಕಲ್ಲ ಮೇಲೆ ನೀರು ಸುರಿದಂತೆ
👉 ಆಕಾಶ ನೋಡೋದಕ್ಕೆ ನೂಕುನುಗ್ಗಲೇ ?
👉 ಗಾಳಿ ಬಂದಾಗ ತೂರಿಕೋ.
👉 ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ.
👉 ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.
👉 ಬಿರಿಯಾ ಉಂಡ ಬ್ರಾಹ್ಮಣ ಭಿಕ್ಷೆ ಬೇಡಿದ.

👉 ದುಡ್ಡೇ ದೊಡ್ಡಪ್ಪ.
👉 ಬರಗಾಲದಲ್ಲಿ ಅಧಿಕ ಮಾಸ.
👉 ಹೊಳೆ ನೀರಿಗೆ ದೊಣ್ಣೆನಾಯಕನ ಅಪ್ಪಣೆ ಬೇಕೆ ?
👉 ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡ ಹಾಗೆ
👉 ಕುರುಡರ ರಾಜ್ಯದಲ್ಲಿ ಒಕ್ಕಣ್ಣನೇ ರಾಜ.
👉 ಮಂತ್ರಕ್ಕಿಂತ ಉಗುಳೇ ಜಾಸ್ತಿ.
👉 ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ.
👉 ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ.
👉 ಕಂತೆಗೆ ತಕ್ಕ ಬೊಂತೆ .
👉 ಪುರಾಣ ಹೇಳೋಕ್ಕೆ, ಬದನೇಕಾಯಿ ತಿನ್ನೋಕ್ಕೆ.

👉 ಅಂಕೆ ಇಲ್ಲದ ಕಪಿ ಲಂಕೆ ಸುಟ್ಟಿತು.
👉 ಓದಿ ಓದಿ ಮರುಳಾದ ಕೋಚಂಭಟ್ಟ .
👉 ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಸುಖವಿಲ್ಲ.
👉 ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆಯೇ ಮೇಲು.
👉 ಬೆಟ್ಟ ಅಗೆದು ಇಲಿ ಹಿಡಿದ ಹಾಗೆ.
👉 ಓದುವಾಗ ಓದು, ಆಡುವಾಗ ಆಡು.
👉 ಮೇಲೆ ಬಿದ್ದ ಸೂಳೆ ಮೂರು ಕಾಸಿಗೂ ಬೇಡ.
👉 ಸ0ಸಾರ ಗುಟ್ಟು, ವ್ಯಾಧಿ ರಟ್ಟು.
👉 ಗಿಣಿ ಸಾಕಿ ಗಿಡುಗನ ಕೈಗೆ ಕೊಟ್ಟರಂತೆ .
👉 ಕೊಟ್ಟವನು ಕೋಡಂಗಿ , ಇಸ್ಕೊಂಡೋನು ಈರಭದ್ರ.

👉 ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ.
👉 ಮುಖ ನೋಡಿ ಮಣೆ ಹಾಕು.
👉 ಕುರಿ ಕಾಯೋದಕ್ಕೆ ತೋಳನನ್ನು ಕಳಿಸಿದರ0ತೆ.
👉 ಮಂತ್ರಕ್ಕೆ ಮಾವಿನಕಾಯಿ ಉದುರತ್ಯೇ ?
👉 ತುಂಬಿದ ಕೊಡ ತುಳುಕುವುದಿಲ್ಲ.
👉 ಉಪಿಗಿಂತ ರುಚಿಯಿಲ್ಲ ತಾಯಿಗಿಂತ ದೇವರಿಲ್ಲ.
👉 ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯೇ ?
👉 ಇರಲಾರದೆ ಇರುವೆ ಬಿಟ್ಟುಕೊಂಡ ಹಾಗೆ.
👉 ಎಂಜಲು ಕೈಯಲ್ಲಿ ಕಾಗೆ ಓಡಿಸದ ಬುದ್ಧಿ.
👉 ಕೈ ತೋರಿಸಿ ಅವಲಕ್ಷಣ ಅನ್ನಿಸಿಕೊ0ಡರು.

👉 ದುಡಿಮೆಯೇ ದುಡ್ಡಿನ ತಾಯಿ.
👉 ಇಲಿ ಬಂತು ಅಂದರೆ ಹುಲಿ ಬಂತು ಎಂದರು .
👉 ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣಸಂಕಟ
👉 ಊರಿಗೆ ಬಂದವಳು ನೀರಿಗೆ ಬರದೇ ಇರುತ್ತಾಳೆಯೇ ?
👉 ಇರುಳು ಕಂಡ ಭಾವೀಲಿ ಹಗಲು ಬಿದ್ದರಂತೆ
👉 ಕೋತಿ ಕೈಯಲ್ಲಿ ಮಾಣಿಕ್ಯ ಕೊಟ್ಟ ಹಾಗೆ.
👉 ಶಿವಪೂಜೇಲಿ ಕರಡಿ ಬಿಟ್ಟ ಹಾಗೆ.
👉 ರೋಗಿ ಬಯಸಿದ್ದು ಹಾಲು-ಅನ್ನ, ವೈದ್ಯ ಕೊಟ್ಟಿದ್ದು ಹಾಲು-ಅನ್ನ.
👉 ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು.
👉 ಹೊರಗೆ ಥಳಕು ಒಳಗೆ ಹುಳಕು.

👉 ಸಂಕಟ ಬಂದಾಗ ವೆಂಕಟರಮಣ
👉 ಯಥಾ ರಾಜ ತಥಾ ಪ್ರಜಾ.
👉 ಕೂತು ತಿನ್ನುವವನಿಗೆ ಕುಡಿಕೆ ಹಣ ಸಾಲದು.
👉 ಬೆರಳು ತೋರಿಸಿದರೆ ಹಸ್ತ ನುಂಗಿದಂತೆ .
👉 ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದರಂತೆ .
👉 ಈಚಲ ಮರದ ಕೆಳಗೆ ಕುಳಿತು ಮಜ್ಜಿಗೆ ಕುಡಿದ ಹಾಗೆ.
👉 ಉಪ್ಪು ತಿಂದ ಮನೆಗೆ ಎರಡು ಬಗೆಯ ಬೇಡ.
👉 ಬಡವನ ಕೋಪ ದವಡೆಗೆ ಮೂಲ.
👉 ಒಪ್ಪೋತ್ತುಂಡವ ಯೋಗಿ, ಎರಡೊತ್ತುತಂದವ ಭೋಗಿ, ಮೂರೊತ್ತುಂಡವ ರೋಗಿ, ನಾಲ್ಕೊತ್ತುಂಡವನ ಹೊತ್ಕೊಂಡ್ಹೋಗಿ.

👉 ಬಲ್ಲವನೇ ಬಲ್ಲ ಬೆಲ್ಲದ ರುಚಿಯ.
👉 ಕತ್ತೆಗೇನು ಗೊತ್ತು ಕಸ್ತೂರಿ ಪರಿಮಳ.
👉 ಶರಣರ ಬದುಕು ಅವರ ಮರಣದಲ್ಲಿ ನೋಡು.
👉 ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದ ಹಾಗೆ.
👉 ಕಳ್ಳನ ಮನಸ್ಸು ಹುಳಿ-ಹುಳಿಗೆ.
👉 ಕೋತಿಗೆ ಹೆಂಡ ಕುಡಿಸಿದ ಹಾಗೆ.
👉 ಹಾವೂ ಸಾಯಬೇಕು, ಕೋಲೂ ಮುರಿಯಬಾರದು.
👉 ಹಾಲಿನಲ್ಲಿ ಹುಳಿ ಹಿಂಡಿದಂತೆ .
👉 ಮಳ್ಳಿ ಮಳ್ಳಿ ಮಂಚಕ್ಕೆ ಎಷ್ತು ಕಾಲು ಎಂದರೆ , ಮೂರು ಮತ್ತೊಂದು ಅಂದಳಂತೆ .
👉 ಮೂರ್ತಿ ಚಿಕ್ಕದಾದರು ಕೀರ್ತಿ ದೊಡ್ಡದು.

👉 ರಾತ್ರಿಯೆಲ್ಲಾ ರಾಮಾಯಣ ಕೇಳಿ, ಬೆಳಗಾಗೆದ್ದು ರಾಮನಿಗೂ ಸೀತೆಗೂ ಏನು ಸಂಬಂಧ ಅಂದ ಹಾಗೆ.
👉 ನಾರಿ ಮುನಿದರೆ ಮಾರಿ.
👉 ಕೆಟ್ಟ ಮೇಲೆ ಬುದ್ಧಿ ಬಂತು, ಅಟ್ಟ ಮೇಲೆ ಒಲೆ ಉರಿಯಿತು.
👉 ಬೆಂಕಿಯಿಲ್ಲದೆ ಹೊಗೆಯಾಡುವುದಿಲ್ಲ.
👉 ಪಾಪಿ ಸಮುದ್ರ ಹೊಕ್ಕಿದರೂ ಮೊಳಕಾಲುದ್ದ ನೀರು.
👉 ಹರೆಯದಲ್ಲಿ ಹಂದಿ ಕೂಡ ಚೆನ್ನಾಗಿರುತ್ತೆ.
👉 ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯ್ತು.
👉 ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ.
👉 ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡು.
👉 ಬೆಳ್ಳಗಿರುವುದೆಲ್ಲಾ ಹಾಲಲ್ಲ.
👉 ಹೊಸ ವೈದ್ಯನಿಗಿಂತ ಹಳೇ ರೋಗೀನೇ ಮೇಲು.

👉 ಬಡವರ ಮನೆ ಊಟ ಚೆನ್ನ, ಶ್ರೀಮಂತರ ಮನೆ ನೋಟ ಚೆನ್ನ.
👉 ತೋಟ ಶೃಂಗಾರ , ಒಳಗೆ ಗೋಣಿ ಸೊಪ್ಪು.
👉 ಬಾಯಿ ಬಿಟ್ಟರೆ ಬಣ್ಣಗೇಡು.
👉 ಸಂಕಟ ಬಂದಾಗ ವೆಂಕಟರಮಣ .
👉 ಇದ್ದಿದ್ದು ಇದ್ದ ಹಾಗೆ ಹೇಳಿದ್ರೆ ಎದ್ದು ಬಂದು ಎದೆಗೆ ಒದ್ದನಂತೆ
👉 ಒಕ್ಕಣ್ಣನ ರಾಜ್ಯದಲ್ಲಿ ಒಂದು ಕಣ್ಣು ಮುಚ್ಚಿಕೊಂಡು ನಡಿ.
👉 ಸೀರೆ ಗಂಟು ಬಿಚ್ಚೋವಾಗ ದಾರದ ನಂಟು ಯಾರಿಗೆ ಬೇಕು.
👉 ಮನೆ ತುಂಬಾ ಮುತ್ತಿದ್ದರೆ ತಿಕಕ್ಕೂ ಪೋಣಿಸಿಕೊಂಡರಂತೆ .
👉 ಕುಡಿಯೋ ನೀರಿನಲ್ಲಿ ಕೈಯಾಡಿಸಿದ ಹಾಗೆ.
👉 ಅಟ್ಟದ ಮೇಲಿಂದ ಬಿದ್ದವನಿಗೆ ದಡಿಗೆ ತೊಗೊಡು ಹೇರಿದಂತೆ

👉 ಮೀಸೆ ಬಂದವನಿಗೆ ದೇಶ ಕಾಣಲ್ಲ
👉 ಊರು ಸುಟ್ಟರೂ ಹನುಮಂತರಾಯ ಹೊರಗೆ.
👉 ಆಕಳು ಕಪ್ಪಾದರೆ ಹಾಲು ಕಪ್ಪೆ.
👉 ಕಬ್ಬು ಡೊಂಕಾದರೆ ಸಿಹಿ ಡೊಂಕೇ .
👉 ಹತ್ತಾರು ಜನ ಓಡಾಡೋ ಕಡೇಲಿ ಹುಲ್ಲು ಬೆಳೆಯೋಲ್ಲ.
👉 ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಂಡಂತೆ
👉 ಕೋಣನ ಮುಂದೆ ಕಿನ್ನರಿ ಬಾರಿಸಿದ ಹಾಗೆ.
👉 ನರಿ ಕೂಗು ಗಿರಿ ಮುಟ್ಟುತ್ಯೇ ?
👉 ಅತ್ತೆ ಮೇಲಿನ ಕೋಪ ಕೊತ್ತಿ ಮೇಲೆ.
👉 ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ

👉 ಹೌದಪ್ಪನ ಚಾವಡಿಯಲ್ಲಿ ಅಲ್ಲಪ್ಪನನ್ನು ಕೇಳುವವರಾರು.
👉 ತಂಗನ ಮುಂದೆ ಸಿಂಗವೇ? ಸಿಂಗನ ಮುಂದೆ ಮಂಗನೇ ?
👉 ಕಾಸಿದ್ದರೆ ಕೈಲಾಸ.
👉 ಕಂಕುಳದಲಿ ದೊಣ್ಣೆ, ಕೈಯಲ್ಲಿ ಶರಣಾರ್ತಿ.
👉 ಕೊನೆಯ ಕೂಸು ಕೊಳೆಯಿತು, ಒನೆಯ ಕೂಸು ಬೆಳೆಯಿತು.
👉 ಕೆಲಸವಿಲ್ಲದ ಕುಂಬಾರ ಮಗನ ಮುಕಳಿ ಕೆತ್ತಿದನಂತ .
👉 ಆರಕ್ಕೆ ಹೆಚ್ಚಿಲ್ಲ, ಮೂರಕ್ಕೆ ಕಮ್ಮಿಯಿಲ್ಲ.
👉 ಕಳ್ಳನ ಹೆಂಡತಿ ಎಂದಿದ್ದರೂ ಮುಂಡೆ .
👉 ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ.
👉 ಹೂವಿನ ಜೊತೆ ದಾರ ಮುಡಿಯೇರಿತು.

👉 ಮಳೆ ಹುಯ್ದರೆ ಕೇಡಲ್ಲ, ಮಗ ಉಂಡರೆ ಕೇಡಲ್ಲ.
👉 ಐದು ಬೆರಳು ಒಂದೇ ಸಮ ಇದುವುದಿಲ್ಲ.
👉 ಕೋಪದಲ್ಲಿ ಕೊಯ್ದ ಮೂಗು ಶಾಂತವಾದ ಮೇಲೆ ಬರುವುದಿಲ್ಲ.
👉 ಕುರಿ ಕೊಬ್ಬಿದಷ್ಟು ಕುರುಬನಿಗೇ ಲಾಭ.
👉 ದೀಪದ ಕೆಳಗೆ ಯಾವತ್ತೂ ಕತ್ತಲೆ.
👉 ತಮ್ಮ ಕೋಳಿ ಕೂಗಿದ್ದರಿಂದಲೇ ಬೆಳಗಾಯ್ತು ಎಂದುಕೊಂಡರು
👉 ಅತ್ತ ದರಿ, ಇತ್ತ ಪುಲಿ.
👉 ಬಿಸಿ ತುಪ್ಪ, ನುಂಗೋಕೂ ಆಗೋಲ್ಲ, ಉಗುಳೋಕ್ಕೂ ಆಗೋಲ್ಲ.
👉 ಆಪತ್ತಿಗಾದವನೇ ನೆಂಟ .
👉 ಶಂಖದಿಂದ ಬಂದರೇನೇ ತೀರ್ಥ.

👉 ಹನಿಹನಿಗೂಡಿದರೆ ಹಳ್ಳ, ತೆನೆತೆನೆಗೂಡಿದರೆ ಬಳ್ಳ.
👉 ಎಲ್ಲಾ ಜಾಣ, ತುಸು ಕೋಣ.
👉 ಇಟ್ಟುಕೊಂಡವಳು ಇರೋ ತನಕ, ಕಟ್ಟಿಕೊಂಡವಳು ಕೊನೇ ತನಕ.
👉 ಮೂಗಿಗಿಂತ ಮೂಗುತ್ತಿ ಭಾರ.
👉 ನವಿಲನ್ನು ನೋಡಿ ಕೆಂಭೂತ ಪುಕ್ಕ ಕೆದರಿದಂತೆ .
👉 ಬೀದೀಲಿ ಹೋಗ್ತಿದ್ದ ಮಾರಿಯನ್ನು ಕರೆದು ಮನೆಗೆ ಸೇರಿಸಿಕೊಂಡಂತೆ .
👉 ಕಣ್ಣರಿಯದಿದ್ದರೂ ಕರುಳರಿಯುತ್ತದೆ.
👉 ತನಗೇ ಜಾಗವಿಲ್ಲ. ಕೊರಳಲ್ಲಿ ಡೋಲು ಬೇರೆ.
👉 ಧರ್ಮಕ್ಕೆ ಕೊಟ್ಟ ಆಕಳ ಹಲ್ಲು ಎಣಿಸಿದರು.
👉 ಇರೋ ಮೂವರಲ್ಲಿ ಕದ್ದೋರು ಯಾರು ?

👉 ಮುಳುಗುತ್ತಿರುವವನಿಗೆ ಹುಲ್ಲು ಕಡ್ಡಿಯೂ ಆಸರೆ.
👉 ತೋಳ ಬಿದ್ದರೆ ಆಳಿಗೊಂದು ಕಲ್ಲು.
👉 ಕೆಟ್ಟ ಕಾಲ ಬಂದಾಗ ಕಟ್ಟಿಕೊಂಡವಳೂ ಕೆಟ್ಟವಳು.
👉 ಹುಲ್ಲಿನ ಬಣವೇಲಿ ಸೂಜಿ ಹುಡುಕಿದ ಹಾಗೆ.
👉 ಮುಸುಕಿನೊಳಗೆ ಗುದ್ದಿಸಿಕೊಂಡಂತೆ .
👉 ತನ್ನ ಓಣಿಯಲ್ಲಿ ನಾಯಿಯೂ ಸಿಂಹ .
👉 ಹೆದರುವವರ ಮೇಲೆ ಕಪ್ಪೆ ಎಸೆದಂತೆ .
👉 ಹೊಳೆ ದಾಟಿದ ಮೇಲೆ ಅಂಬಿಗ ಮಿಂಡ
👉 ಅಕ್ಕ ಸತ್ತರೆ ಅಮಾವಾಸ್ಯೆ ನಿಲ್ಲುತ್ತದೆಯೇ ?
👉 ಅಕ್ಕಸಾಲಿ, ಅಕ್ಕನ ಚಿನ್ನವನ್ನೂ ಬಿಡುವುದಿಲ್ಲ.

👉 ಯುದ್ಧ ಕಾಲೇ ಶಸ್ತ್ರಾಭ್ಯಾಸ.
👉 ರೇಶ್ಮೆ ಶಾಲಿನಲ್ಲಿ ಸುತ್ತಿದ ಚಪ್ಪಲಿ ಏಟು.
👉 ನಾಯಿ ಬಾಲ ಇಂದಿಗೂ ಡೊಂಕು .
👉 ಮಹಾಜನಗಳು ಹೋದದ್ದೇ ದಾರಿ.
👉 ಅರವತ್ತಕ್ಕೆ ಅರಳು ಮರಳು.
👉 ಜನ ಮರುಳೋ ಜಾತ್ರೆ ಮರುಳೋ.
👉 ಕುಂಟನಿಗೆ ಎಂಟು ಚೇಶ್ಟೆ.
👉 ಐದು ಕುರುಡರು ಆನೆಯನ್ನು ಬಣ್ಣಿಸಿದ ಹಾಗೆ.
👉 ಬೊಗಳುವ ನಾಯಿ ಕಚ್ಚುವುದಿಲ್ಲ.
👉 ಸಣ್ಣವರ ನೆರಳು ಉದ್ದವಾದಾಗ ಸೂರ್ಯನಿಗೂ ಮುಳುಗುವ ಕಾಲ.

👉 ಕೈಗೆಟುಕದ ದ್ರಾಕ್ಷಿ ಹುಳಿ.
👉 ಕೊಂಕಣ ಸುತ್ತಿ ಮೈಲಾರಕ್ಕೆ ಬಂದರು .
👉 ದುಷ್ಟರ ಕಂಡರೆ ದೂರ ಇರು.
👉 ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ.
👉 ನಿಸ್ಸಹಾಯಕರಮೇಲೆ ಹುಲ್ಲು ಕಡ್ಡಿ ಸಹ ಬುಸುಗುಟ್ಟುತ್ತೆ.
👉 ಕಂಡವರ ಮಕ್ಕಳನ್ನು ಭಾವಿಗೆ ತಳ್ಳಿ ಆಳ ನೋಡುವ ಬುದ್ಧಿ.
👉 ಹಂಗಿನ ನೆರೆಮನೆಗಿಂತ ಗುಡಿಸಲೇ ಮೇಲು.
👉 ಚೆಲ್ಲಿದ ಹಾಲಿಗೆ, ಒಡೆದ ಕನ್ನಡಿಗೆ ಎಂದೂ ಅಳಬೇಡ.
👉 ಕದ್ದು ತಿಂದ ಹಣ್ಣು, ಪಕ್ಕದ ಮನೆ ಊಟ, ಎಂದೂ ಹೆಚ್ಚು ರುಚಿ.
👉 ಕುದಿಯುವ ಎಣ್ಣೆಯಿಂದ ಕಾದ ತವಾದ ಮೇಲೆ ಬಿದ್ದ ಹಾಗೆ.

👉 ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು.
👉 ಹಳೆ ಚಪ್ಪಲಿ, ಹೊಸ ಹೆಂಡತಿ ಕಚ್ಚೂಲ್ಲ.
👉 ರವಿ ಕಾಣದ್ದನ್ನು ಕವಿ ಕಂಡ .
👉 ಕೆಟ್ಟು ಪಟ್ಟಣ ಸೇರು.
👉 ಕಾಲಿನದು ಕಾಲಿಗೆ, ತಲೆಯದು ತಲೆಗೆ.
👉 ಹಲ್ಲಿದ್ದವನಿಗೆ ಕಡಲೆ ಇಲ್ಲ, ಕದಲೆಯಿದ್ದವನಿಗೆ ಹಲ್ಲಿಲ್ಲ.
👉 ಕನ್ನಡಿ ಒಳಗಿನ ಗಂಟು ಕೈಗೆ ದಕ್ಕೀತೆ ?
👉 ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ತೂಗಬಲ್ಲದು.
👉 ನಮಸ್ಕಾರ ಮಾಡಲು ಹೋಗಿ ದೇವಸ್ಥಾನದ ಗೋಪುರ ತಲೆ ಮೇಲೆ ಬಿತ್ತು.
👉 ಮಾಡಬಾರದ್ದು ಮಾಡಿದರೆ ಆಗಬಾರದ್ದು ಆಗುತ್ತೆ.

👉 ನಾಯಿಗೆ ಹೇಳಿದರೆ, ನಾಯಿ ತನ್ನ ಬಾಲಕ್ಕೆ ಹೇಳಿದಂತೆ .
👉 ಮಹಡಿ ಹತ್ತಿದ ಮೇಲೆ ಏಣಿ ಒದ್ದ ಹಾಗೆ.
👉 ಹುಟ್ಟಿಸಿದ ದೇವರು ಹುಲ್ಲು ಮೇಯಿಸದೇ ಇರುವನೇ ?
👉 ಕೊಟ್ಟದ್ದು ತನಗೆ, ಬಚ್ಚಿಟ್ಟಿದ್ದು ಪರರಿಗೆ.
👉 ಮದುವೆಯಾಗೋ ಗಂಡ ಅಂದರೆ ನೀನೆ ನನ್ನ ಹೆಂಡತಿಯಾಗು ಅಂದ ಹಾಗೆ.
👉 ಕೈಗೆ ಬಂಡ ತುತ್ತು ಬಾಯಿಗೆ ಬರಲಿಲ್ಲ.
👉 ತಾನೂ ತಿನ್ನ, ಪರರಿಗೂ ಕೊಡ.
👉 ಗಂಡಸಿಗೇಕೆ ಗೌರಿ ದುಃಖ ?
👉 ನಗುವ ಹೆಂಗಸು , ಅಳುವ ಗಂಡಸು ಇಬ್ಬರನ್ನೂ ಸಂಬಾಬಾರದು .
👉 ನೂರು ಜನಿವಾರ ಒಟ್ಟಿಗಿರಬಹುದು, ಮೂರು ಜಡೆ ಒಟ್ಟಿಗಿರುವುದಿಲ್ಲ.

👉 ಗಾಯದ ಮೇಲೆ ಬರೆ ಎಳೆದ ಹಾಗೆ.
👉 ಗುಡ್ಡ ಕಡಿದು, ಹಳ್ಳ ತುಂಬಿಸಿ , ನೆಲ ಸಮ ಮಾಡಿದ ಹಾಗೆ.
👉 ಅತಿ ಆಸೆ ಗತಿ ಕೇಡು.
👉 ವಿನಾಶ ಕಾಲೇ ವಿಪರೀತ ಬುದ್ಧಿ.
👉 ಅತಿಯಾದರೆ ಆಮೃತವೂ ವಿಷವೇ.
👉 ಬಡವ, ನೀ ಮಡಿಗಿದಾಂಗ ಇರು.
👉 ಆತುರಗಾರನಿಗೆ ಬುದ್ಧಿ ಮಟ್ಟ.
👉 ರತ್ನ ತಗೊಂಡು ಹೋಗಿ ಗಾಜಿನ ತುಂಡಿಗೆ ಹೋಲಿಸಿದ ಹಾಗೆ.
👉 ಗಾಜಿನ ಮನೇಲಿರುವರು ಅಕ್ಕ ಪಕ್ಕದ ಮನೆ ಮೇಲೆ ಕಲ್ಲೆಸೆಯಬಾರದು.
👉 ಹುಚ್ಚುಮುಂಡೆ ಮದುವೇಲಿ ಉಂಡವನೇ ಜಾಣ.

👉 ಉಂಡೂ ಹೋದ, ಕೊಂಡೂ ಹೋದ.
👉 ಎಲೆ ಎತ್ತೋ ಜಾಣ ಅಂದರೆ ಉಂಡೋರೆಷ್ಟು ಅಂದರಂತೆ
👉 ಕೋತಿ ತಾನು ಮೊಸರನ್ನ ತಿಂದು ಮೇಕೆ ಬಾಯಿಗೆ ಒರಸಿದ ಹಾಗೆ.
👉 ಹಾಡಿದ್ದೇ ಹಾಡೋ ಕಿಸುಬಾಯಿ ದಾಸ.
👉 ಹಸಿ ಗೋಡೆ ಮೇಲೆ ಹರಳು ಎಸೆದಂತೆ .
👉 ಊರು ಹೋಗು ಅನ್ನುತ್ತೆ, ಕಾಡು ಬಾ ಅನ್ನುತ್ತೆ.
👉 ಕಾಮಾಲೆ ಕಣ್ಣವನಿಗೆ ಕಾಣುವುದೆಲ್ಲಾ ಹಳದಿ.
👉 ಹಾಲು ಕುಡಿದ ಮಕ್ಕಳೇ ಬದುಕೋಲ್ಲ, ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತವೆಯೇ

Leave a Reply

Your email address will not be published. Required fields are marked *

error: Content Copyright protected !!